Search This Blog

Saturday 23 September 2017

ಶಾಕಾಬ್ದೇ ಲಿಖ್ಯಮಾನೇ ಮುನಿ ರಸ ಮನುಭಿರ್ಮಂಡಪಂ ಶೈಲ ಸಾರೈಃ

ಶಾಕಾಬ್ದೇ ಲಿಖ್ಯಮಾನೇ ಮುನಿ ರಸ ಮನುಭಿರ್ಮಂಡಪಂ ಶೈಲ ಸಾರೈರ್
ಮುಕ್ತೈ ನಿರ್ಮಾಯ ಭಕ್ತ್ಯಾಧೃತ ವಿಬುಧ ಗಣಂ ಶ್ರೀ ಮಹೇಂದ್ರೋತ್ರ ಸಾಕ್ಷಾತ್
ಮಧ್ಯೇ ವಿಷ್ಣುಂ ಕೃಶಾನೋರ್ದ್ದಿಶಿ ದಿವಸ್ಕರಂ ನೈರೃತೇ ವಿಘ್ನರಾಜಂ
ವಾಯವ್ಯೇ ಶೈಲಪುತ್ರೀಂ ಹರಹರಿತಿ ಸೌರೈರ್ವಂದಿತಂ ವಿಶ್ವನಾಥಂ
ಶ್ರೀ ಗೋವಿಂದ ಮಿಶ್ರಸ್ಯ ನೀಲೋಪಲೇನ ಘಟಿತೋ ಮಠ ಏ ಯಸ್ಯ
ಸಂಘರ್ಷ್ಣಾದುಪಚಿತಾ ಕಿಲ ನೀಲ ಮೂರ್ತಿಃ ಅತನ್ವತೀ ವತ ವೃತೈವ ಕಲಂಕ ವಾದಂ 
ವಿಂಬೇ ವಿಧೋರ್ವಿಮಲ ಭಾಸಿ ವಿಭಾತಿ ರೇಖಾ || ಶ್ರೀ ಶತಾವಧಾನಸ್ಯ ||
  ಇದು ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ವಾರಿಯಲ್ಲಿನ ಶಾಸನ. ಪಂಚಾಯತನ ಪೂಜಾವಿಧಾನದಲ್ಲಿ ಇದನ್ನು ನಿರ್ಮಿಸಲಾದ ಮಠ ಒಂದರಲ್ಲಿನ ದೇವಾಲಯವನ್ನು ನಿರ್ದೇಶಿಸಲಾಗಿದೆ ಇದಕ್ಕೆ ನಾನು ಇಲ್ಲಿ ಹೆಚ್ಚೇನನ್ನೂ ಬರೆಯಲಾರೆ. ಇದರ ಲಿಪಿ ಬಂಗಾಳಿ ಸುಮಾರು ೧೫ನೇ ಶತಮಾನದ ಲಿಪಿ. 
ಯೋ ಯೋ ಯಾಂ ಯಾಂ ತನುಂ ಭಕ್ತಃ ಶ್ರದ್ಧಯಾರ್ಚಿತು ಮಿಚ್ಛತಿ |
ತಸ್ಯ ತಸ್ಯಾ ಚಲಂ ಶ್ರದ್ಧಾಂ ತಾಮೇವ ವಿಧದಾಮ್ಯಹಂ || ೨೧ ||

ಸ ತಯಾ ಶ್ರದ್ಧಯಾ ಯುಕ್ತಸ್ತಸ್ಯಾರಾಧನಮೀಹತೇ |
ಲಭತೇ ಚ ತತಃ ಕಾಮಾನ್ ಮಯೈವ ವಿಹಿತಾನ್ ಹಿತಾನ್ || ೨೨ ||

ಭಗವದ್ಗೀತೆಯಲ್ಲಿ ೭ ನೇ ಅಧ್ಯಾಯದ ೨೧, ೨೨ನೇ ಶ್ಲೋಕಗಳಲ್ಲಿ ಯಾವನು ದೇವತೆಗಳ ದೇಹವನ್ನು ಅಥವಾ ಮೂರ್ತಿಯನ್ನು ಅರ್ಚಿಸಲು ಇಷ್ಟಪಡುತ್ತಾನೋ ಅವನಿಗೆ ಆಯಾ ದೇವತೆಗಳಲ್ಲಿ ಶ್ರದ್ಧೆಯುಂಟು ಮಾಡುವೆನು ಮತ್ತು ಅವರ ಬಯಕೆಗಳನ್ನು ಈಡೇರಿಸುವೆನು ಎಂದು ಶ್ರೀ ಕೃಷ್ಣನು ಹೇಳಿದ್ದಾನೆ. ಆದರೆ ಭಗವಂತನನ್ನೇ ಸರ್ವಾಂತರ್ಯಾಮಿ ಎಂದು ತಿಳಿದು ಧ್ಯಾನಮಾಡುವುದು ಶ್ರೇಷ್ಠ ವೆಂದು ಅದೇ ಅಧ್ಯಾಯದಲ್ಲಿ ತಿಳಿಸಿದ್ದಾನೆ.

ಶ್ರೀ ಶಂಕರಾಚಾರ್ಯರು ಷಣ್ಮತಸ್ಥಾಪಕರೆಂದು ಹೆಸರು ಪಡೆದಿದ್ದು ಪಂಚಾಯತನ ಪೂಜೆಯನ್ನು ಪ್ರಚುರ ಪಡಿಸಿದರೆಂಬುದು ಪ್ರತೀತಿ. ಆದರೆ ಅವರ ಪ್ರಸ್ಥಾನತ್ರಯ ಭಾಷ್ಯಗಳಲ್ಲಿ ಎಲ್ಲಿಯೂ ಪಂಚಾಯತನ ಪೂಜೆಯ ವಿಷಯ ಬರುವುದಿಲ್ಲ. ಷಣ್ಮತದ ವಿಷಯವೂ ಬರುವುದಿಲ್ಲ. ಆದರೆ ರೂಢಮೂಲವಾಗಿ ಅವರು ಪಂಚಾಯತನ ಪೂಜೆಯನ್ನು ವಿಧಿಸಿ ಬೇರೆ ಬೇರೆ ಉಪಾಸಕರ ಮಧ್ಯೆ ಇರುವ ಮನಸ್ತಾಪವನ್ನು ಶಮನಗೊಳಸಿದರೆಂದು ನಂಬಲಾಗಿದೆ. ಈ ದೇವರ ಪೂಜಾವಿಧಿ ನಿತ್ಯ ಕರ್ಮ ದಲ್ಲಿ ಸೇರುವುದು.

ಪಂಚಾಯತನ ದೇವತೆಗಳು
ಸೂರ್ಯಗಣಪತಿಅಂಬಿಕಾಶಿವವಿಷ್ಣು , ಈ ಐದೂ ದೇವತೆಗಳ ಮೂರ್ತಿಗಳಿದ್ದಲ್ಲಿ ಅಥವಾ ಶಿಲೆಗಳಿದ್ದಲ್ಲಿ ಅವರ ಮನೆ ದೇವತೆಯ ಮೂರ್ತಿ ಅಥವಾ ಶಿಲೆಯನ್ನು ಮಧ್ಯದಲ್ಲಿಟ್ಟು ಉಳಿದವುಗಳನ್ನು ಈ ಕೆಳಗಿನ ಕ್ರಮದಲ್ಲಿಡುವುದು ಶಾಸ್ತ್ರರೀತ್ಯಾ ಪದ್ದತಿ. ಪೂಜೆಗೆ ಸಾಮಾನ್ಯವಾಗಿ ಉತ್ತರ ಅಥವಾ ಪೂರ್ವಕ್ಕೆ ಅಭಿಮುಖವಾಗಿ ಕುಳಿತುಕೊಳ್ಳುವುದು. ದೇವರ ಮಂಟಪ ಪಶ್ಚಿಮ ಅಭಿಮುಖವಾಗಿದ್ದರೆ ಮಂಟಪಕ್ಕೇ ಎದುರಾಗಿ ಪಶ್ಚಿಮಕ್ಕೆ ಆಭಿಮುಖವಾಗಿ ಕುಳಿತುಕೊಳ್ಳಬೇಕಾಗುತ್ತೆ. ಆದ್ದರಿಂದ ದೇವರ ಮಂಟಪವು ಪೂರ್ವ ಅಥವಾ ಉತ್ತರ ಅಭಿಮುಖವಾಗಿ ಇರುವುದು ಒಳ್ಳೆಯದು. ಆಗ ದೇವರ ಮಂಟಪವು ಎಡಕ್ಕೆ ಬರುವಂತೆ ಇದ್ದು ಪೂಜೆಗೆ ಅನುಕೂಲವಾಗುವುದು.

ಪಂಚಾಯತನ ದೇವತೆಗಳು ಸೂರ್ಯ, ಗಣಪತಿ, ಅಂಬಿಕಾ, ಶಿವ, ವಿಷ್ಣು. ಇವುಗಳಲ್ಲಿ ಆಯಾ ದೇವತೆಗಳ ಭಕ್ತರು ಮುಖ್ಯ ದೇವತೆಯನ್ನು ಮಧ್ಯದಲ್ಲಿಟ್ಟು ಉಳಿದ ದೇವತೆಗಳನ್ನು ಸುತ್ತಲೂ ಇಟ್ಟು ಪೂಜಿಸಬೇಕು. ಈ ಐದೂ ದೆವತೆಗಳಿಗೆ ಬೇರೆ ಬೇರೆ ಬಗೆಯ ಶಿಲೆಗಳಿವೆ. ಮೂರ್ತಿಗಳ ಬದಲು ಅವುಗಳನ್ನಿಟ್ಟು ಅಭಿಷೇಕ ಪೂಜೆ ಮಾಡುವ ಪದ್ಧತಿಗಳಿವೆ.

ವಿಷ್ಣು ಕೇಂದ್ರ ; ಶಿವ -ಪೂರ್ವ ಉತ್ತರ ಮಧ್ಯೆ-ಈಶಾನ್ಯದಲ್ಲಿ; ಗಣಪತಿ ಪೂರ್ವ ದಕ್ಷಿಣ ಮದ್ಯೆ ಆಗ್ನೇಯದಲ್ಲಿ ; ಸೂರ್ಯ ಪಶ್ಚಿಮ ದಕ್ಷಿಣ ಮಧ್ಯೆ ನೈತ್ಯದಲ್ಲಿ ; ಅಂಬಿಕಾ: ಪಶ್ಚಿಮ ಉತ್ತರ ಮಧ್ಯೆ -ವಾಯವ್ಯದಲ್ಲಿ ಶಿವ ಕೇಂದ್ರ : -ವಿಷ್ಣು ಪೂರ್ವ ಉತ್ತರ ಮಧ್ಯೆ-ಈಶಾನ್ಯದಲ್ಲಿ; ಸೂರ್ಯ- ಪೂರ್ವ ದಕ್ಷಿಣ ಮದ್ಯೆ ಆಗ್ನೇಯದಲ್ಲಿ ; ಗಣಪತಿ -ಪಶ್ಚಿಮ ದಕ್ಷಿಣ ಮಧ್ಯೆ ನೈತ್ಯದಲ್ಲಿ ; ಅಂಬಿಕಾ: ಪಶ್ಚಿಮ ಉತ್ತರ ಮಧ್ಯೆ - ವಾಯವ್ಯದಲ್ಲಿ.

ಸೂರ್ಯಕೇಂದ್ರ : ಶಿವ -ಪೂರ್ವ ಉತ್ತರ ಮಧ್ಯೆ-ಈಶಾನ್ಯದಲ್ಲಿ; ಗಣಪತಿ -ಪೂರ್ವ ದಕ್ಷಿಣ ಮದ್ಯೆ ಆಗ್ನೇಯದಲ್ಲಿ ; -ವಿಷ್ಣು -ಪಶ್ಚಿಮ ದಕ್ಷಿಣ ಮಧ್ಯೆ ನೈತ್ಯದಲ್ಲಿ ; ಅಂಬಿಕಾ: ಪಶ್ಚಿಮ ಉತ್ತರ ಮಧ್ಯೆ -ವಾಯವ್ಯದಲ್ಲಿ.

ಅಂಬಿಕಾ ಕೇಂದ್ರ : -ವಿಷ್ಣು -ಪೂರ್ವ ಉತ್ತರ ಮಧ್ಯೆ-ಈಶಾನ್ಯದಲ್ಲಿ; ಶಿವ -ಪೂರ್ವ ದಕ್ಷಿಣ ಮದ್ಯೆ ಆಗ್ನೇಯದಲ್ಲಿ ; ಗಣಪತಿ -ಪಶ್ಚಿಮ ದಕ್ಷಿಣ ಮಧ್ಯೆ ನೈತ್ಯದಲ್ಲಿ;: ಸೂರ್ಯ- ಪಶ್ಚಿಮ ಉತ್ತರ ಮಧ್ಯೆ -ವಾಯವ್ಯದಲ್ಲಿ.


ಗಣಪತಿ ಕೇಂದ್ರ : -ವಿಷ್ಣು -ಪೂರ್ವ ಉತ್ತರ ಮಧ್ಯೆ-ಈಶಾನ್ಯದಲ್ಲಿ; ಶಿವ -ಪೂರ್ವ ದಕ್ಷಿಣ ಮದ್ಯೆ ಆಗ್ನೇಯದಲ್ಲಿ ; ಸೂರ್ಯ -ಪಶ್ಚಿಮ ದಕ್ಷಿಣ ಮಧ್ಯೆ ನೈತ್ಯದಲ್ಲಿ ; ಅಂಬಿಕಾ - ಪಶ್ಚಿಮ ಉತ್ತರ ಮಧ್ಯೆ -ವಾಯವ್ಯದಲ್ಲಿ.



No comments:

Post a Comment